ರಾಜ್ಯ

ಸದ್ಗುರು ಮಾತಿನಲ್ಲಿ ಆಳವಾದ ತತ್ವ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್‌ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಡಿಸಿಎಂ ಡಿಕೆ ಶಿವಕುಮಾರ್‌, ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಎನಿಸಿತು. ನನ್ನ ಹೆಸರಿನಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.

ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಹೆಣ್ಣಮಕ್ಕಳಿಗೆ ಕೆಂಪಮ್ಮ ಅಂತ, ಗಂಡು ಮಕ್ಕಳೂ ಹುಟ್ಟಿದರೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಶಿವಾಲ್ದಪ್ಪನಿಗೆ ನಮ್ಮ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ಮೊದಲು ಕೆಂಪರಾಜ್‌ ಅಂತ ಹೆಸರಿಟ್ಟು, ನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್‌ ಅಂತ ಹೆಸರಿಟ್ಟರು ಎಂದು ವಿವರಿಸಿದ್ದಾರೆ.

ಹಾಗೆಯೇ ಸದ್ಗುರು ಅವರ ಮಾತಿನಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್‌ಗಳು ಮನಸ್ಸಿಗೆ ಹಿತ ನೀಡಿದವು ಎಂದು ಟ್ವೀಟ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

13 seconds ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

18 mins ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

34 mins ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

45 mins ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

55 mins ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

1 hour ago