ರಾಜ್ಯ

ಸದ್ಗುರು ಮಾತಿನಲ್ಲಿ ಆಳವಾದ ತತ್ವ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್‌ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಡಿಸಿಎಂ ಡಿಕೆ ಶಿವಕುಮಾರ್‌, ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಎನಿಸಿತು. ನನ್ನ ಹೆಸರಿನಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.

ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಹೆಣ್ಣಮಕ್ಕಳಿಗೆ ಕೆಂಪಮ್ಮ ಅಂತ, ಗಂಡು ಮಕ್ಕಳೂ ಹುಟ್ಟಿದರೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಶಿವಾಲ್ದಪ್ಪನಿಗೆ ನಮ್ಮ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ಮೊದಲು ಕೆಂಪರಾಜ್‌ ಅಂತ ಹೆಸರಿಟ್ಟು, ನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್‌ ಅಂತ ಹೆಸರಿಟ್ಟರು ಎಂದು ವಿವರಿಸಿದ್ದಾರೆ.

ಹಾಗೆಯೇ ಸದ್ಗುರು ಅವರ ಮಾತಿನಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್‌ಗಳು ಮನಸ್ಸಿಗೆ ಹಿತ ನೀಡಿದವು ಎಂದು ಟ್ವೀಟ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

3 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

3 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

3 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

3 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago