ರಾಜ್ಯ

ನಿರ್ಮಲ ಸೀತಾರಾಮನ್‌ಗೂ ಡೀಪ್ ಫೇಕ್‌ ಕಾಟ ; ಎಫ್‌ಐಆರ್‌ ದಾಖಲು

ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್​​​ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್​​ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಪೋಲಿಸ್‌  ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್​​ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಇದನ್ನು ಓದಿ: ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್‌ ಮಾಡಿದ ರಾಹುಲ್‌ ಗಾಂಧಿ! ವಿಡಿಯೊ ವೈರಲ್‌… ಇಂಟರ್‌ನೆಟ್‌ ಓದುಗರಿಂದಲೂ ಪ್ರಶಂಸೆ…

ಭಾರತದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್​​​​ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್​​​ ಬುಕ್​​ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್​​ ಠಾಣೆಯ ಸಬ್​​​​​​ ಇನ್ಸ್​ಪೆಕ್ಟರ್​​​​​ ರಮೇಶ್​​​​ ಎಸ್​​ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್​​​​​​​ ಫೇಕ್​​ ಮಾಡಿ ಅದನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್ಐಆರ್​​ನಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

3 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

6 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago