ರಾಜ್ಯ

ನಿರ್ಮಲ ಸೀತಾರಾಮನ್‌ಗೂ ಡೀಪ್ ಫೇಕ್‌ ಕಾಟ ; ಎಫ್‌ಐಆರ್‌ ದಾಖಲು

ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್​​​ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್​​ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಪೋಲಿಸ್‌  ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್​​ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಇದನ್ನು ಓದಿ: ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್‌ ಮಾಡಿದ ರಾಹುಲ್‌ ಗಾಂಧಿ! ವಿಡಿಯೊ ವೈರಲ್‌… ಇಂಟರ್‌ನೆಟ್‌ ಓದುಗರಿಂದಲೂ ಪ್ರಶಂಸೆ…

ಭಾರತದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್​​​​ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್​​​ ಬುಕ್​​ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್​​ ಠಾಣೆಯ ಸಬ್​​​​​​ ಇನ್ಸ್​ಪೆಕ್ಟರ್​​​​​ ರಮೇಶ್​​​​ ಎಸ್​​ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್​​​​​​​ ಫೇಕ್​​ ಮಾಡಿ ಅದನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್ಐಆರ್​​ನಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago