ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು ‘ಸ್ಕ್ಯಾಮ್ ಲಾರ್ಡ್’ ಎಂದು ಉಲ್ಲೇಖಿಸಿ ರಾಜ್ಯವನ್ನು ‘ಲೂಟಿ’ ಮಾಡುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ಪ್ರತಿನಿಧಿಸುವ ವಕೀಲರ ತಂಡವು ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಸ್ಕ್ಯಾಮ್ ಲಾರ್ಡ್ ಎಂಬ ಶೀರ್ಷಿಕೆಯ ಪೋಸ್ಟ್ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಇತರ ಸಚಿವರ ಚಿತ್ರಗಳನ್ನು ‘ಇದು ಹಗರಣಗಳ ಕಥೆಯಲ್ಲ, ಅವುಗಳ ಹಿಂದಿನವರ ಕಥೆ’ ಎಂಬ ಶೀರ್ಷಿಕೆ ನೀಡಲಾಗಿದೆ. ‘ಇದು ಕರ್ನಾಟಕವನ್ನು ಹಗಲಿರುಳು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಹಗರಣ ಸಾಮ್ರಾಜ್ಯದ ನಿಜವಾದ ಕಥೆ’ ಎಂದು ಅದು ಹೇಳಿದೆ. ಬಿಜೆಪಿ, ‘ಲೂಟಿ ಮತ್ತು ‘ಸ್ಕ್ಯಾಮ್’ ಎಂಬ ಪದಗಳನ್ನು ಪದೇ ಪದೇ ಬಳಸುವ ಮೂಲಕ ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದು ಕೇವಲ ರಾಜಕೀಯ ಟೀಕೆಯಲ್ಲ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರ ವ್ಯಕ್ತಿತ್ವವನ್ನು ಅವಹೇಳನ ಮಾಡುವ ವ್ಯವಸ್ಥಿತ ಪಿತೂರಿ ಎಂದು ಕಾಂಗ್ರೆಸ್ ಆರೋಪಿಸಿದೆ. ಸಮಾಜದ ಶಾಂತಿಯನ್ನು ಕದಡುವ ಇಂತಹ ಪೋಸ್ಟ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.
ಪೋಸ್ಟ್ ಪ್ರಕಟವಾದ ಕೆಲವೇ ಗಂಟೆಗಳಲ್ಲಿ, ವಿರೋಧ ಪಕ್ಷ ಬಿಜೆಪಿ ವಿಧಾನಸಭೆಯಲ್ಲಿ ರಾಜ್ಯದಲ್ಲಿ ‘ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯ’ದ ವಿಷಯವನ್ನು ಪ್ರಸ್ತಾಪಿಸಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…