ರಾಜ್ಯ

ಮೈಸೂರು ದಸರಾದಲ್ಲಿ ಏರ್‌ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್‌ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕ ಸರ್ಕಾರ, ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸವಿದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್‌ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಗಜಪಡೆಗಳು ಆಗಮಿಸಿ ತಾಲೀಮು ನಡೆಸುತ್ತಿವೆ. ಅಲ್ಲಲ್ಲಿ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು, ದಸರಾ ಬರುವ ಮುನ್ನವೇ ಎಲ್ಲಾ ಕೆಲಸಗಳು ಮುಗಿಯಲಿವೆ.

ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಏರ್‌ಶೋ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಲಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡಲಾಗುತ್ತಿದ್ದು, ಜಂಬೂಸವಾರಿ ದಿನದಂದು ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago