ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. ಈಗ ದೆಹಲಿಯಲ್ಲಿ ಆಗಿರೋದು ಅದೇ. ರಾಷ್ಟ್ರ ರಾಜಕಾರಣವನ್ನು ಅರಿತು ಶತ್ರುವನ್ನು ಸೋಲಿಸಬೇಕು. ಜಾತ್ಯಾತೀತರು ಒಂದಾಗಿ, ಜಾತಿಯನ್ನು ಸೋಲಿಸಬೇಕು ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮತ ವಿಭಜನೆಯಿಂದ ಬಿಜೆಪಿ ಗೆದ್ದಿದೆ. ನಮ್ಮವರೇ ದ್ವೇಷ ಸಾಧಿಸಿಕೊಂಡು ಶತ್ರುವನ್ನು ಬಲಿಷ್ಠ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಎಸ್ಸಿ, ಎಸ್ಟಿ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಹಾಗೂ ಸಮುದಾಯ ಬಲಿಷ್ಟ ಮಾಡುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಮಾಡುತ್ತೇವೆ. ರಾಜಕೀಯ ವಂಚಿತ ಸಮುದಾಯಗಳಿಗೆ ಅನುಕೂಲ ಮಾಡುವ ಉದ್ದೇಶವಿದೆ. ಸಮಾವೇಶ ಮಾಡೇ ಮಾಡುತ್ತೇವೆ ಎಂದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…