ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ
ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.
ಆಗಸ್ಟ್ 12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು ಎಂದು ತಿಳಿಸಿದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…