ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ
ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.
ಆಗಸ್ಟ್ 12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು ಎಂದು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…