ರಾಜ್ಯ

ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ: ಈಶ್ವರ ಖಂಡ್ರೆ ನೇತೃತ್ವದ ಸಚಿವರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಸೋಮವಾರ (ಆ.12) ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಜಾರ್ಖಂಡ್ ನ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

5 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

6 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

7 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

7 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

8 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago