ಬೆಂಗಳೂರು: ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಸೋಮವಾರ (ಆ.12) ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.
ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.
ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.
ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.
ಜಾರ್ಖಂಡ್ ನ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಪಾಲ್ಗೊಂಡಿದ್ದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…