ರಾಜ್ಯ

ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ: ಈಶ್ವರ ಖಂಡ್ರೆ ನೇತೃತ್ವದ ಸಚಿವರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಸೋಮವಾರ (ಆ.12) ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಜಾರ್ಖಂಡ್ ನ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago