ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.
ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಸಲಾಗಿದ್ದು, ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಭಾಗಿಯಾಗಿದ್ದರು.
ಸಂಭ್ರಮಾಚರಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, 27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿಯಲ್ಲಿ ಅಭೂತಪೂರ್ವ ಗೆಲುವು ದೊರೆತಿದೆ. ದೆಹಲಿಯ ಪಕ್ಷದ ಎಲ್ಲಾ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆಗಳು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮುಖವಾಡ ಕಳಚಿದೆ. ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…