ರಾಜ್ಯ

ಮತ್ತಷ್ಟು ಹೆಚ್ಚಾದ ಪ್ರಭಾವಿ ಸಚಿವರ ದೆಹಲಿ ಯಾತ್ರೆ

ಬೆಂಗಳೂರು: ರಾಜಕೀಯವಾಗಿ ನವೆಂಬರ್ ಕ್ರಾಂತಿಯ ಚರ್ಚೆಗಳ ನಡುವೆ ಸಚಿವ ಸಂಪುಟದ ಪ್ರಭಾವಿ ಸಚಿವರ ದೆಹಲಿಯಾತ್ರೆಗಳು ಮತ್ತಷ್ಟು ಹೆಚ್ಚಾಗಿವೆ.

ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರ ಆಪ್ತರನ್ನು ಭೇಟಿ ಮಾಡಿ ವಾಪಸ್ ಬಂದ ಬೆನ್ನಲ್ಲೆ ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿಯತ್ತ ಮುಖ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಸೋನಿಯಾ ಗಾಂಧಿಯವರ ಆಪ್ತರಾದ ಅಂಬಿಕಾ ಸೋನಿ ಅವರನ್ನು ಭೇಟಿ ಮಾಡಿ ಬಂದಿದ್ದರು. ಜೊತೆಗೆ ಕೆಲವು ಹಿರಿಯ ನಾಯಕರ ಜೊತೆಯೂ ಮಾತುಕತೆ ನಡೆಸಿದ್ದರು.

ನವೆಂಬರ್ ಕ್ರಾಂತಿಯ ವಿಚಾರವಾಗಿ ನಾನಾ ರೀತಿಯ ವದಂತಿಗಳು ಹಬ್ಬುತ್ತಿವೆ. ಡಿ.ಕೆ.ಶಿವಕುಮಾರ್ ಅವರ ಮೌನ ತಂತ್ರಗಾರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಕಳವಳ ಸೃಷ್ಟಿಸಿದೆ. ಹೀಗಾಗಿ ಸಿದ್ದರಾಮಯ್ಯ ಆಪ್ತರಾಗಿರುವ ಸಚಿವ ಸತೀಶ್ ಜಾರಕಿಹೊಳಿ ಮೂರು ದಿನ ದೆಹಲಿಯಲ್ಲಿ ಬೀಡು ಬಿಟ್ಟು ತಮ್ಮದೇ ಆದ ಕಾರ್ಯತಂತ್ರ ಬಳಸಲಿದ್ದಾರೆ ಎಂಬ ಚರ್ಚೆಗಳಾಗುತ್ತಿವೆ.

ಅಧಿಕಾರ ಹಂಚಿಕೆ ಸೇರಿದಂತೆ ಯಾವುದೇ ರಾಜಕೀಯ ವಿಚಾರಗಳಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಅಖಾಡ ಪ್ರವೇಶ ಮಾಡುವುದಿಲ್ಲ. ಬದಲಾಗಿ ತಮ್ಮ ಆಪ್ತರನ್ನು ಮೊದಲು ಬಿಟ್ಟು ಪೂರಕವಾದ ವೇದಿಕೆ ಸೃಷ್ಟಿಸಿಕೊಳ್ಳುವ ತಾಂತ್ರಿಕತೆಯನ್ನು ಮೊದಲಿನಿಂದಲೂ ಅನುಸರಿಸುತ್ತಿರುವುದು ಕಂಡುಬಂದಿದೆ. ಈಗಲೂ ಸಿದ್ದರಾಮಯ್ಯ ಅದೇ ಮಾದರಿಯ ರಾಜಕಾರಣ ಮಾಡುತ್ತಿದ್ದಾರೆಯೇ ಎಂಬ ಅನುಮಾನಗಳು ಕಾಡಲಾರಂಭಿಸಿವೆ.

ಸತೀಶ್ ಜಾರಕಿಹೊಳಿ ತಮ್ಮ ಇಲಾಖೆಯ ಕಾರ್ಯ ಯೋಜನೆಗಳಿಗೆ ಸಂಬಂಧಪಟ್ಟಂತೆ ಚರ್ಚಿಸಲು ದೆಹಲಿಗೆ ತೆರಳುತ್ತಿದ್ದಾರೆ ಎಂದು ಹೇಳುತ್ತಲೇ ತೆರೆಮರೆಯಲ್ಲಿ ಮತ್ತೊಂದು ತಂತ್ರಗಾರಿಕೆ ಅನುಸರಿಸಲಾಗುತ್ತಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಹೈಕಮಾಂಡ್‌ಗೆ ವರದಿ ನೀಡುವ ಮೂಲಕ ಎಲ್ಲಾ ರೀತಿಯ ಗೊಂದಲಗಳನ್ನು ಬಗೆಹರಿಸಿ ಸತೀಶ್ ಜಾರಕಿಹೊಳಿ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

5 mins ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

38 mins ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

45 mins ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

49 mins ago

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…

1 hour ago

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು…

1 hour ago