ಬೆಂಗಳೂರು: ರಾಜಕೀಯವಾಗಿ ನವೆಂಬರ್ ಕ್ರಾಂತಿಯ ಚರ್ಚೆಗಳ ನಡುವೆ ಸಚಿವ ಸಂಪುಟದ ಪ್ರಭಾವಿ ಸಚಿವರ ದೆಹಲಿಯಾತ್ರೆಗಳು ಮತ್ತಷ್ಟು ಹೆಚ್ಚಾಗಿವೆ.
ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರ ಆಪ್ತರನ್ನು ಭೇಟಿ ಮಾಡಿ ವಾಪಸ್ ಬಂದ ಬೆನ್ನಲ್ಲೆ ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿಯತ್ತ ಮುಖ ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಸೋನಿಯಾ ಗಾಂಧಿಯವರ ಆಪ್ತರಾದ ಅಂಬಿಕಾ ಸೋನಿ ಅವರನ್ನು ಭೇಟಿ ಮಾಡಿ ಬಂದಿದ್ದರು. ಜೊತೆಗೆ ಕೆಲವು ಹಿರಿಯ ನಾಯಕರ ಜೊತೆಯೂ ಮಾತುಕತೆ ನಡೆಸಿದ್ದರು.
ನವೆಂಬರ್ ಕ್ರಾಂತಿಯ ವಿಚಾರವಾಗಿ ನಾನಾ ರೀತಿಯ ವದಂತಿಗಳು ಹಬ್ಬುತ್ತಿವೆ. ಡಿ.ಕೆ.ಶಿವಕುಮಾರ್ ಅವರ ಮೌನ ತಂತ್ರಗಾರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಕಳವಳ ಸೃಷ್ಟಿಸಿದೆ. ಹೀಗಾಗಿ ಸಿದ್ದರಾಮಯ್ಯ ಆಪ್ತರಾಗಿರುವ ಸಚಿವ ಸತೀಶ್ ಜಾರಕಿಹೊಳಿ ಮೂರು ದಿನ ದೆಹಲಿಯಲ್ಲಿ ಬೀಡು ಬಿಟ್ಟು ತಮ್ಮದೇ ಆದ ಕಾರ್ಯತಂತ್ರ ಬಳಸಲಿದ್ದಾರೆ ಎಂಬ ಚರ್ಚೆಗಳಾಗುತ್ತಿವೆ.
ಅಧಿಕಾರ ಹಂಚಿಕೆ ಸೇರಿದಂತೆ ಯಾವುದೇ ರಾಜಕೀಯ ವಿಚಾರಗಳಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಅಖಾಡ ಪ್ರವೇಶ ಮಾಡುವುದಿಲ್ಲ. ಬದಲಾಗಿ ತಮ್ಮ ಆಪ್ತರನ್ನು ಮೊದಲು ಬಿಟ್ಟು ಪೂರಕವಾದ ವೇದಿಕೆ ಸೃಷ್ಟಿಸಿಕೊಳ್ಳುವ ತಾಂತ್ರಿಕತೆಯನ್ನು ಮೊದಲಿನಿಂದಲೂ ಅನುಸರಿಸುತ್ತಿರುವುದು ಕಂಡುಬಂದಿದೆ. ಈಗಲೂ ಸಿದ್ದರಾಮಯ್ಯ ಅದೇ ಮಾದರಿಯ ರಾಜಕಾರಣ ಮಾಡುತ್ತಿದ್ದಾರೆಯೇ ಎಂಬ ಅನುಮಾನಗಳು ಕಾಡಲಾರಂಭಿಸಿವೆ.
ಸತೀಶ್ ಜಾರಕಿಹೊಳಿ ತಮ್ಮ ಇಲಾಖೆಯ ಕಾರ್ಯ ಯೋಜನೆಗಳಿಗೆ ಸಂಬಂಧಪಟ್ಟಂತೆ ಚರ್ಚಿಸಲು ದೆಹಲಿಗೆ ತೆರಳುತ್ತಿದ್ದಾರೆ ಎಂದು ಹೇಳುತ್ತಲೇ ತೆರೆಮರೆಯಲ್ಲಿ ಮತ್ತೊಂದು ತಂತ್ರಗಾರಿಕೆ ಅನುಸರಿಸಲಾಗುತ್ತಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಹೈಕಮಾಂಡ್ಗೆ ವರದಿ ನೀಡುವ ಮೂಲಕ ಎಲ್ಲಾ ರೀತಿಯ ಗೊಂದಲಗಳನ್ನು ಬಗೆಹರಿಸಿ ಸತೀಶ್ ಜಾರಕಿಹೊಳಿ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…