ರಾಜ್ಯ

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ

ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ಪೋಸ್ಟ್ ಮಾಡಿದ್ದ ನಟ ಚೇತನ್ ಅಹಿಂಸಾ ವಿರುದ್ಧ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಗಡೀಪಾರಿಗೆ ಒತ್ತಾಯಿಸಿವೆ.

ಡಾ.ರಾಜ್‌ಕುಮಾರ್‌ರವರ ೯೭ನೇ ಹುಟ್ಟುಹಬ್ಬ ಸಂಭ್ರಮಾಚರಣೆ ನಡುವೆ ವಿವಾದ ಸೃಷ್ಟಿಸಿದ್ದ ನಟ ಚೇತನ್ ಅಹಿಂಸಾ ವಿರುದ್ಧ ಹಲವರು ಟೀಕಾಪ್ರಹಾರ ನಡೆಸಿದ್ದರು.

ಪದೇಪದೇ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಲು ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಈತನನ್ನು ಗಡೀಪಾರು ಮಾಡಬೇಕೆಂದು ಒತ್ತಾಯಿಸಿದ್ದು, ಈ ನಡುವೆ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಸೇರಿದಂತೆ ನೂರಾರು ಮಂದಿ ಚೇತನ್ ನಿವಾಸಕ್ಕೆ ಮುತ್ತಿಗೆ ಹಾಕಿದ ವೇಳೆ ನಟ ತನ್ನ ತಪ್ಪಿಗೆ ಕ್ಷಮೆ ಯಾಚಿಸಿದ್ದಾನೆ.

ಸಾ.ರಾ.ಗೋವಿಂದು ಅವರು ಚೇತನ್ ಕ್ಷಮಯಾಚನೆಗೆ ಲಾಯಕ್ಕಲ್ಲ. ಅವನಿಗೆ ಯಾವುದೇ ಯೋಗ್ಯತೆ ಇಲ್ಲ.  ಡಾ.  ರಾಜ್‌ಕುಮಾರ್‌ರವರ ಕರ್ನಾಟಕದ ಕೊಡುಗೆ ಬಗ್ಗೆ ಪ್ರಶ್ನೆ ಮಾಡುವ ಅಧಿಕಾರವಿಲ್ಲ. ಅವನು ಎಷ್ಟು ಸಿನಿಮಾ ಮಾಡಿದ್ದಾನೆ?, ಹಾದಿ ಬೀದಿಯಲ್ಲಿ ಬೇಡಿಕೊಂಡು ತಿಂತಿದ್ದೀಯಾ. ನೀನು ಮೇರು ನಟರ ಬಗ್ಗೆ ಮಾತನ್ನಾಡುತ್ತೀಯ. ನೀನೊಬ್ಬ ನಿರುದ್ಯೋಗಿ. ಕೈಯಲ್ಲಿ ಮಾಡುವುದಕ್ಕೆ ಕೆಲಸ ಇಲ್ಲ. ಮೊದಲು ಕೆಲಸ ಹುಡುಕಿಕೋ. ನಾವೂ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಆತನನ್ನು ಈ ಕೂಡಲೇ ರಾಜ್ಯದಿಂದ ಹೊರಗೆ ಹಾಕಬೇಕು. ಅಣ್ಣಾವ್ರ ಸ್ಮಾರಕದ ಜಾಗ ನಮಗೆಲ್ಲ ದೇವಸ್ಥಾನ. ಸ್ಮಾರಕವನ್ನು ವಾಣಿಜ್ಯ ಸಂಕೀರ್ಣ ಅಂತೀಯಲ್ಲ ಅಲ್ಲಿ ಯಾವ ವಾಣಿಜ್ಯ ಚಟುವಟಿಕೆ ನಡೆಯುತ್ತಿದೆ ಎಂದು ಸಾ.ರಾ.ಗೋವಿಂದು ಪ್ರಶ್ನೆ ಮಾಡಿದ್ದಾರೆ.

ನಿರ್ಮಾಪಕರ ಸಂಘ ಆಕ್ರೋಶ
ಸಾಮಾಜಿಕ ಜಾಲತಾಣದಲ್ಲಿ ಚೇತನ್ ಅಹಿಂಸಾಗೆ ಬುದ್ದಿ ಇಲ್ಲ, ಕನ್ನಡಿಗರನ್ನು ಕೆಣಕುವ ಮಾತನ್ನಾಡಿದ್ದು, ಮುಂದೆ ಈ ರೀತಿ ನಡೆದುಕೊಂಡರೆ ಅವನಿಗೆ ತಕ್ಕ ಶಾಸ್ತಿಯಾಗುತ್ತದೆ ಎಂದು ನಿರ್ಮಾಪಕರ ಸಂಘ ಎಚ್ಚರಿಸಿದೆ.
ಒಬ್ಬ ಮೇರು ನಟನ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು. ಇಲ್ಲದಿದ್ದರೆ ಅವರಿಗೆ ಅಭಿಮಾನಿಗಳೇ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದ್ದಾರೆ. ಕೂಡಲೇ ರಾಜ್ಯಸರ್ಕಾರ ಈತನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

35 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

5 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

5 hours ago