ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾದರಿ ರಾಜಕಾರಿಣಿಯಾಗಿದ್ದಾರೆ. ಆಗಿದ್ದರೂ ಅವರಿಂದ ತಪ್ಪು ಆಗಿದೆ. ಅಲ್ಲದೇ ಅದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮುಡಾ ನಿವೇಶನಗಳನ್ನು ವಿಧಾನಸಭೆ ಅಧಿವೇಶನ ನಡೆಯುವಾಗಲೇ ವಾಪಾಸ್ ನೀಡಿದ್ದರೆ ಎಲ್ಲವೂ ಮುಗಿಯುತ್ತಿತ್ತು. ಆದರೆ ಇದೀಗ ಮೈಸೂರು ಲೋಕಾಯುಕ್ತ ಹಾಗೂ ಇ.ಡಿ ದೂರು ದಾಖಲಿಸಿ ತನಿಖೆ ನಡೆಸುತ್ತಿರುವ ವೇಳೆ ಸೈಟ್ ವಾಪಸ್ ನೀಡಿರುವುದು ಸರಿಯಲ್ಲ. ಹೀಗಾಗಿ ಅವರ ಮುಂದಿರೋದು ರಾಜೀನಾಮೆಯೊಂದೇ ದಾರಿ ಎಂದರು.
ಸಿದ್ದರಾಮಯ್ಯ ಅವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದ್ದರೆ, ಅವರ ಇತಿಹಾಸವನ್ನು ತಿಳಿಯಬೇಕಿದ್ದರೆ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ತನಿಖೆಯ ನಂತರ ಆರೋಪ ಮುಕ್ತವಾದರೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿ. ಪಕ್ಷ ಅವರ ಮೇಲೆ ಗೌರವ ಇಟ್ಟಿದ್ದರೆ ಮುಖ್ಯಮಂತ್ರಿ ಮಾಡಲಿ. ನಾವೇ ಆಗ ಅಭಿನಂದನೆ ತಿಳಿಸುತ್ತೇವೆ ಎಂದರು.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…