ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾದರಿ ರಾಜಕಾರಿಣಿಯಾಗಿದ್ದಾರೆ. ಆಗಿದ್ದರೂ ಅವರಿಂದ ತಪ್ಪು ಆಗಿದೆ. ಅಲ್ಲದೇ ಅದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮುಡಾ ನಿವೇಶನಗಳನ್ನು ವಿಧಾನಸಭೆ ಅಧಿವೇಶನ ನಡೆಯುವಾಗಲೇ ವಾಪಾಸ್ ನೀಡಿದ್ದರೆ ಎಲ್ಲವೂ ಮುಗಿಯುತ್ತಿತ್ತು. ಆದರೆ ಇದೀಗ ಮೈಸೂರು ಲೋಕಾಯುಕ್ತ ಹಾಗೂ ಇ.ಡಿ ದೂರು ದಾಖಲಿಸಿ ತನಿಖೆ ನಡೆಸುತ್ತಿರುವ ವೇಳೆ ಸೈಟ್ ವಾಪಸ್ ನೀಡಿರುವುದು ಸರಿಯಲ್ಲ. ಹೀಗಾಗಿ ಅವರ ಮುಂದಿರೋದು ರಾಜೀನಾಮೆಯೊಂದೇ ದಾರಿ ಎಂದರು.
ಸಿದ್ದರಾಮಯ್ಯ ಅವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದ್ದರೆ, ಅವರ ಇತಿಹಾಸವನ್ನು ತಿಳಿಯಬೇಕಿದ್ದರೆ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ತನಿಖೆಯ ನಂತರ ಆರೋಪ ಮುಕ್ತವಾದರೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿ. ಪಕ್ಷ ಅವರ ಮೇಲೆ ಗೌರವ ಇಟ್ಟಿದ್ದರೆ ಮುಖ್ಯಮಂತ್ರಿ ಮಾಡಲಿ. ನಾವೇ ಆಗ ಅಭಿನಂದನೆ ತಿಳಿಸುತ್ತೇವೆ ಎಂದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…