ರಾಜ್ಯ

ಅಮೆರಿಕಾ, ಥಾಯ್ಲೆಂಡ್ ನಂತೆ ಭಾರತಕ್ಕೆ ಬರುತ್ತಾ ಡೆಂಗ್ಯೂ ವ್ಯಾಕ್ಸೀನ್ ?‌

ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹೆಚ್ಚಾಗಿ ಮಕ್ಕಳು ಸಹ ಈ ಡೆಂಗ್ಯೂ ಜ್ವರಕ್ಕೆ  ತುತ್ತಾಗಿ ನರಳುತ್ತಿದ್ದಾರೆ. ಕೆಲವು ಜಿಲ್ಲೆಯಲ್ಲಿ ಈ ಡೆಂಗ್ಯೂಗೆ ಮಕ್ಕಳು ಬಲಿಯಾಗಿದ್ದು, ಪೋಷಕರಲ್ಲಿ ಸಾಕಷ್ಟು ಆತಂಕ ಉಂಟು ಮಾಡುತ್ತಿದೆ.

ಇನ್ನು ಮಕ್ಕಳಲ್ಲಿ ಡೆಂಗ್ಯೂ ಕೇಸ್‌ ಜಾಸ್ತಿಯಾಗುತ್ತಿರುವ ಕಾರಣ ಅಮೆರಿಕಾ, ಥಾಯ್ಲೆಂಡ್ ನಂತೆ ಭಾರತದಲ್ಲಿ ಡೆಂಗ್ಯೂ ವ್ಯಾಕ್ಸೀನ್ ಗಾಗಿ ಹೆಚ್ಚಿನ ಬೇಡಿಕೆ ಶುರುವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಹೌದು, ಭಾರತದಲ್ಲಿ ಇಷ್ಟು ದಿನ ಡೆಂಗ್ಯೂ ಗೆ ಯಾವುದೇ ರೀತಿಯ ವ್ಯಾಕ್ಸೀನ್ ಇರಲಿಲ್ಲ. ಆದರೆ ಅಮೆರಿಕಾ ಈ ಡೆಂಗ್ಯೂ ಜ್ವರಕ್ಕಾಗಿ ಎರಡು ವ್ಯಾಕ್ಸೀನ್‌ ಗಳನ್ನ ಕಂಡು ಹಿಡಿದಿದೆ. Dengvaxia,q denga, ಎಂಬ ವ್ಯಾಕ್ಸೀನ್ ಕಂಡು ಹಿಡಿದಿದ್ದು, ಪರೀಕ್ಷೆಯಲ್ಲಿಯೂ ಕೂಡ ಪಾಸ್ ಆಗಿದೆ. ಅಲ್ಲದೆ ಥಾಯ್ಲೆಂಡ್‌ನಲ್ಲಿ ಬೆಸ್ಟ್ ರಿಸಲ್ಟ್ ಸಹ ಸಿಕ್ಕಿದೆ. ಥಾಯ್ಲೆಂಡ್​ನಲ್ಲಿ ಡೆಂಗ್ಯೂ ಸ್ಫೋಟಗೊಂಡ ಸಂದರ್ಭದಲ್ಲಿ ಇದೇ ವ್ಯಾಕ್ಸೀನ್ ಗಳನ್ನ ಬಳಕೆ ಮಾಡಿ ಪ್ರಕರಣಗಳನ್ನ ಹತೋಟಿಗೆ ತರಲಾಗಿದೆ. ಈಗಾಗಿಯೇ ನಮ್ಮಲ್ಲಿ ಈ ವ್ಯಾಕ್ಸೀನ್‌ ಗೆ ವೈದ್ಯರಿಂದಲೇ ಬೇಡಿಕೆ ಶುರುವಾಗುತ್ತಿದೆ.

ಈ ಡೆಂಗ್ಯೂ ಲಸಿಕೆಯನ್ನು ಆರು ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬಹುದು. ಅದರಲ್ಲೂ ಈ ವ್ಯಾಕ್ಸೀನ್ ಮಕ್ಕಳ ಮೇಲೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಮಕ್ಕಳ ಮೇಲೆ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಡುತ್ತಿರುವುದರಿಂದ ಇದೇ ಕಾರಣಕ್ಕೆ ಈ ವ್ಯಾಕ್ಸೀನ್ ಗೆ ವೈದ್ಯರಿಂದಲೇ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಭಾರತದಲ್ಲಿ ಸೀರಮ್ ಇನ್ಸಿಟಿಟ್ಯೂಟ್ ಒಂದು ಸುತ್ತಿನ ಟ್ರಯಲ್ ಮಾಡಿದೆಯಂತೆ. ಒಂದು ವೇಳೆ ಲೈಸೆನ್ಸ್ ಕ್ಲಿಯರ್ ಆದ್ರೆ ಈ ಡೆಂಗ್ಯೂ ಲಸಿಕೆ ಭಾರತಕ್ಕೆ ಬರುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲಿಯೇ ವ್ಯಾಕ್ಸೀನ್ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago