ಬೆಂಗಳೂರು : ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು.
ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ.
ಜನ ಅಷ್ಟೇ ಅಲ್ಲ ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು.
ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು ಟೀಕಿಸುತ್ತಾರೆ ನಾನು ಆ ಪದ ಬಳಸಲ್ಲ ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…