Mysore
30
scattered clouds

Social Media

ಬುಧವಾರ, 18 ಮಾರ್ಚ್ 2026
Light
Dark

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಯದೆ ಹಗರಣ ನಡೆದಿಲ್ಲ ಎಂಬುದು ಹೈಕೋರ್ಟ್‌ ತೀರ್ಪಿನಿಂದ ಸ್ಪಷ್ಟವಾಗಿದೆ. ಮುಡಾ ಹಗರಣದಲ್ಲಿ ಸಮಗ್ರ ತನಿಖೆಯ ಅವಶ್ಯಕತೆ ಇದೆ ಎಂದು ಕೋರ್ಟ್‌ ಆದೇಶಿಸಿದೆ. ಹೀಗಿದ್ದರೂ ಸಿದ್ದರಾಮಯ್ಯ ತಮ್ಮ ಭಂಡತನದಿಂದ ಹೊರಬರುತ್ತಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ನಾಯಕರು ರಾಜಭವನದ ವಿರುದ್ಧ ಮಾತನಾಡಿದ್ದಾರೆ. ಅಲ್ಲದೇ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಪ್ಪು ಮಾಡಿಲ್ಲ ಎಂದು ಹೇಳುತ್ತಾರೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರ ಇರುವುದು ಸಾಬೀತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

 

Tags:
error: Content is protected !!