ಬೆಂಗಳೂರು: ಇಂದು ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ದಾರಿ ಒಂದೇ ಇರುವುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಸತ್ಯಮೇವ ಜಯತೇ ಎಂದು ಹೇಳಿದರು. ರಾಜ್ಯಪಾಲರು, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದೆ ಸಂವಿಧಾನ ಬಾಹಿರ ಅಪರಾಧ ಎಂದು ಆರೋಪಿಸಿದ್ದರು. ಹೀಗಾಗಿ ಸಾರ್ವಜನಿಕರಲ್ಲಿ ಸಾಂವಿಧಾನಿಕ ಹುದ್ದೆಗೆ ಅಗೌರವಿಸಿದ ಕಾರಣ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಇನ್ನು ಸಿದ್ದುಗೆ ಬೇರೆ ದಾರಿನೇ ಇಲ್ಲ. ಅವರೇ ಸ್ವತಃ ಕಾನೂನು ಪಂಡಿತರು. ಒಬ್ಬ ಸಾಮಾನ್ಯ ಮುಖ್ಯಮಂತ್ರಿ ಕಾಸ್ಟ್ಲಿಲಾಯರನ್ನು ಕರೆಸಿ ವಾದ ಮಂಡಿಸಿದರು. ಆದರೆ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಎಂದಿಗೂ ಸತ್ಯವಾಗಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆ ಪಾಟಲಿಗೆ ಈಡಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಸಿಎಂ ಸಿದ್ದರಾಮಯ್ಯ ಇನ್ನು ಜಾಸ್ತಿ ಬಂಡತನ ಮಾಡದೆ ರಾಜೀನಾಮೆ ನೀಡಿ ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…