ರಾಜ್ಯ

ಡೆಂಗ್ಯೂ ಡೆತ್ ಆಡಿಟ್ ಗೆ ಮುಂದಾದ ಆರೋಗ್ಯ ಇಲಾಖೆ : ಖಾಸಗಿ ಆಸ್ಪತ್ರೆಯವರಿಗೂ ಮಾಹಿತಿ ನೀಡಲು ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಜನರು ಸಾವನ್ನಪ್ಪಿರುವುದು ಕೂಡ ಆತಂಕವನ್ನುಂಟು ಮಾಡುತ್ತಿದೆ. ಡೆಂಗ್ಯೂಗೆ ಬಲಿಯಾದವರ ಬಗ್ಗೆ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಯವರಿಗೆ ಆರೋಗ್ಯ ಇಲಾಖೆ  ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಕೇಸ್‌ ಗಳು ಹೆಚ್ಚಳವಾಗುತ್ತಿದ್ದು,೫೩೭೪ ಹೆಚ್ಚು ಕೇಸ್‌ ದಾಖಲಾಗಿದೆ.  ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೂವರೆ ಸಾವಿರ ಸನಿಹಕ್ಕೆ ತಲುಪಿದೆ . ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಇದುವರೆಗೂ ಏಳು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಬಗ್ಗೆ ಡೆತ್‌ ಆಡಿಟ್‌ ಮಾಡುವುದಕ್ಕೆ ಇಲಾಖೆ ಮುಂದಾಗಿದೆ.

ಖಾಸಗಿ ಆಸ್ಪತ್ರೆಯವರು ಕೂಡ ಡೆಂಗ್ಯೂ ಡೆತ್‌ ಗಳು ಹಾಗೂ  ಪ್ರಕರಣಗಳನ್ನ ನೋಟಿಫೈ ಮಾಡಬೇಕು. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್‌ ಸೈಟ್‌ ನಲ್ಲಿ ಅಪ್ಲೋಡ್‌ ಮಾಡಬೇಕು ಹಾಗೂ ಡೆತ್‌ ಮಾಹಿತಿಯನ್ನು ಹಂಚಿಕೊಳ್ಳಲು ಸಚಿವರು ಸೂಚಿಸಿದ್ದು, ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಯವರು ಡೆಂಗ್ಯೂ ಮಾಹಿತಿಯನ್ನು ಮುಚ್ಚಿಡಬಾರದು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

10 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

12 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

13 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

13 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

13 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

15 hours ago