ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಮೂರು ಪಟ್ಟು ಹೆಚ್ಚು ವರದಿಯಾಗಿದೆ.
ರಾಜ್ಯದಲ್ಲಿ ಇದುವರೆಗೂ 53,866 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 7006 ಮಂದಿಯಲ್ಲಿ ರೋಗ ದೃಢಪಟ್ಟಿದೆ. 352 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಲೇ ಇದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ರಾಜ್ಯದಲ್ಲಿ 2432 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು. ಆದರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಈ ಬಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏಳು ಸಾವಿರ ಗಡಿ ದಾಟಿದೆ. ಈ ಮೂಲಕ ಕಳೆದ ವರ್ಷಕ್ಕಿಂತ ಮೂರುಪಟ್ಟು ಹೆಚ್ಚಿದೆ.
ಈ ಹಿನ್ನೆಲೆಯಲ್ಲಿ ಡೆಂಗ್ಯೂ ಬಗ್ಗೆ ಎಲ್ಲರೂ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಮನೆಯ ಸುತ್ತಮುತ್ತ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರೋಗ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ವಹಿಸದೇ ತಪಾಸಣೆಗೆ ಒಳಗಾಗಬೇಕು ಎಂದು ಮನವಿ ಮಾಡಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…