ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.
ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರೆಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ 12 ರಿಂದ 14 ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ 19 ರಿಂದ 20 ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ರಿಂದ 15 ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತು ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೋಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೇ ತೀವ್ರ ತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…