ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.
ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರೆಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ 12 ರಿಂದ 14 ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ 19 ರಿಂದ 20 ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ರಿಂದ 15 ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತು ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೋಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೇ ತೀವ್ರ ತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…