ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಗೆ ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಸೋಮವಾರ ಹಮ್ಮಿಕೊಂಡಿದ್ದ ಹೊಸ ಹಾದಿ ವೃತ್ತಿ ಮಾರ್ಗದರ್ಶನ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಎಲ್ಲಾ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
2021ರಲ್ಲಿ ಆರಂಭವಾದ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ವಿಘ್ನಗಳು ಎದುರಾಗಿತ್ತು. ಇದೀಗ ಎಲ್ಲಾವನ್ನು ಸರಿಪಡಿಸಿ ನೇಮಕಾತಿ ಆದೇಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕೌಶಲ ಕಲಿಕೆಗೆ ಆದ್ಯತೆ ನೀಡಲಾಗಿದ್ದು, ಹಲವು ಹೊಸ ಕೋರ್ಸ್ಗಳನ್ನು ಪರಿಚಯಿಸಲಾಗಿದೆ. ಹೊಸದಾಗಿ ನೇಮಕವಾದವರು ಗುಣಮಟ್ಟದ ಭೋಧನೆಯತ್ತ ಗಮನಹರಿಸಬೇಕು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ಎಲ್ಲಾ ನೂತನ ಸಹಾಯಕ ಪ್ರಾಧ್ಯಾಪಕರ ಶುಭ ಕೋರಿ, ಕೆಲವು ವಿಶೇಷ ಉಪನ್ಯಾಸ ನಡೆಸಲಾಯಿತು.
ಕಾರ್ಯಾಗಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಶ್ರೀಕರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್.ಮಂಜುಶ್ರೀ, ಆಡಳಿತಾಧಿಕಾರಿ ಶೋಭಾ ಉಪಸ್ಥಿತರಿದ್ದರು.
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…