ರಾಜ್ಯ

ಕರ್ನೂಲ್‌ ಪ್ರಕರಣ ಬಳಿಕ ಎಚ್ಚೆತ್ತಾ ಸಾರಿಗೆ ಇಲಾಖೆ : ನಿಯಮ ಬಾಹಿರವಾಗಿ ಜನರನ್ನು ಸಾಗಿಸುತ್ತಿದ್ದ 6 ಬಸ್‌ ಜಪ್ತಿ

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ 20 ಜನ ಮೃತಪಟ್ಟ ಬೆನ್ನಲ್ಲೇ ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತ್ವರಿತ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ನೇಪಾಳ ಗಡಿಯಿಂದ ನಿಯಮ ಬಾಹಿರವಾಗಿ ಜನರನ್ನು ಸಾಗಿಸುತ್ತಿದ್ದ 6 ಬಸ್‍ಗಳನ್ನು ಜಪ್ತಿ ಮಾಡಲಾಗಿದೆ.

ಗುರುವಾರ ಮುಂಜಾನೆ 4 ಗಂಟೆಯಿಂದಲೇ ಸಾರಿಗೆ ಇಲಾಖೆಯ 100ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದೇವನಹಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಟೋಲ್ ಬಳಿ ತಪಾಸಣೆ ನಡೆಸಿದರು.ಈ ಸಂದರ್ಭದಲ್ಲಿ ನೇಪಾಳ-ಭಾರತ ಗಡಿಯಿಂದ ಆಗಮಿಸಿದ್ದ ಸ್ಲೀಪರ್‍ಕೋಚ್ ಬಸ್‍ಗಳಲ್ಲಿ ಸಾಮಥ್ರ್ಯ ಮೀರಿ ಜನರನ್ನು ತುಂಬಿಕೊಂಡು ಕರೆ ತರುತ್ತಿರುವುದು ಪತ್ತೆಯಾಗಿದೆ.ಸ್ಲೀಪರ್‍ಕೋಚ್ ಬಸ್‍ನಲ್ಲಿ ಇಬ್ಬರು ಮಲಗಲು ಅವಕಾಶವಿರುವ ಸೀಟುಗಳಲ್ಲಿ, ನಾಲ್ಕೈದು ಮಂದಿಯನ್ನು ಕೂರಿಸಿರುವುದು ಪತ್ತೆಯಾಗಿದೆ. ಸೀಟಿನ ಸಾಮಥ್ರ್ಯ ಮೀರಿ ಜನರನ್ನು ಸಾಗುಸುತ್ತಿದ್ದ ಕಾರಣಕ್ಕೆ ಬಸ್‍ಗಳನ್ನು ಜಪ್ತಿ ಮಾಡಲಾಗಿದೆ.

ಈ ಬಸ್‍ಗಳಲ್ಲಿ ಸುರಕ್ಷತಾ ನಿಯಮಗಳನ್ನೂ ಪಾಲನೆ ಮಾಡುತ್ತಿಲ್ಲ. ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನೋಂದಣಿಯಾದ ಈ ಬಸ್‍ಗಳು ಉದಾಸೀನವಾಗಿ ಜನರನ್ನು ಸಾಗಿಸುತ್ತಿವೆ. ಎಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ತಿದ್ದಿಕೊಳ್ಳುತ್ತಿಲ್ಲ ಎಂದು ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ನೇಪಾಳದ ಗಡಿಯಿಂದ ಬಸ್‍ನಲ್ಲಿ ಪ್ರಯಾಣಿಸಿರುವ ಜನರಲ್ಲಿ ಎಷ್ಟು ಮಂದಿಗೆ ಕರಾರುವಾಕ್ಕಾದ ದಾಖಲೆಗಳು ಇವೆ ಎಂಬ ಪ್ರಶ್ನೆ ಉದ್ಭವಿಸಿತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕನಿಂದಲೂ ಹೇಳಿಕೆ ದಾಖಲಿಸಿ, ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಇಂದು ಬೆಳಗ್ಗೆ ನೇಪಾಳದ ಗಡಿಯಿಂದ ಒಟ್ಟು 6 ಬಸ್‍ಗಳಲ್ಲಿ ಪ್ರಯಾಣಿಕರು ಆಗಮಿಸಿದ್ದಾರೆ. ಪ್ರತಿಯೊಂದರಲ್ಲೂ 80 ರಿಂದ 100 ಮಂದಿಯನ್ನು ಕುರಿಗಳಂತೆ ತುಂಬಿರುವ ಮಾಹಿತಿ ಇದೆ. ದಾಖಲಾಲೆಗಳು ಸರಿಯಿದ್ದ ಪ್ರಯಾಣಿಕರಿಗೆ ಮುಂದಿನ ಪ್ರಯಾಣಕ್ಕೆ ಸಾರಿಗೆ ಅಧಿಕಾರಿಗಳು ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಿದರು.

ಇದನ್ನೂ ಓದಿ:-ಆ ಹುಡುಗ ಎಳಸು, ಆತ ವೇಸ್ಟ್‌ ಮೆಟೀರಿಯಲ್‌ : ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

25 ಬಸ್‍ಗಳ ಜಪ್ತಿ:
ಕರ್ನೂಲ್‍ನಲ್ಲಿನ ಬೆಂಕಿ ದುರಂತದ ಬಳಿಕ ಖಾಸಗಿ ಬಸ್‍ಗಳ ಸುರಕ್ಷತೆ ಬಗ್ಗೆ ನಾನಾ ರೀತಿಯ ಪ್ರಶ್ನೆಗಳು ಉದ್ಭವಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ದೇವನಹಳ್ಳಿ ಟೋಲ್ ಬಳಿ ಕಾರ್ಯಾಚರಣೆ ನಡೆಸಲಾಯಿತು.ಸಾರಿಗೆ ಇಲಾಖೆ ಅಧಿಕಾರಿಗಳು ನಿಯಮ ಉಲ್ಲಂಘಿಸಿದ 25ಕ್ಕೂ ಹೆಚ್ಚು ಬಸ್‍ಗಳನ್ನು ಜಪ್ತಿ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ದೇವನಹಳ್ಳಿಯ ಎಆರ್‍ಟಿ ಓ ಅವರು, ನೆರೆ ರಾಜ್ಯಗಳಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದಲ್ಲಿ ತೆರಿಗೆ ಪಾವತಿಸದ ಬಸ್‍ಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡಲಾಗಿದೆ ಎಂದಿದ್ದಾರೆ.

ಎಲ್ಲಾ ಬಸ್‍ಗಳಲ್ಲೂ ತುರ್ತು ನಿರ್ಗಮನ ಬಾಗಿಲು ಸುಸ್ಥಿತಿಯಲ್ಲಿರಬೇಕು. ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದರೆ ಅದನ್ನು ಕೂಡ ಪರಿಶೀಲಿಸಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಬಸ್‍ನ ಕಿಟಕಿ ಗಾಜುಗಳನ್ನು ಒಡೆದು ಹೊರ ಹೋಗಲು ಅವಕಾಶ ಇರಬೇಕು ಮತ್ತು ಅದಕ್ಕಾಗಿ ಸುತ್ತಿಗೆಗಳನ್ನು ಇಟ್ಟಿರಬೇಕು. ಈ ಎಲ್ಲಾ ಅಂಶಗಳನ್ನು ತಪಾಸಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಖಾಸಗಿ ಬಸ್ ಮಾಲೀಕರಿಗೆ ಸುರಕ್ಷತೆಯ ಬಗ್ಗೆ ಹಲವಾರು ಬಾರಿ ಸೂಚನೆಗಳನ್ನು ನೀಡಲಾಗಿದೆ. ಅವರು ಕಡೆಗಣಿಸುತ್ತಿದ್ದಾರೆ. ಪ್ರಯಾಣಿಕರನ್ನು ಹೊರತು ಪಡಿಸಿ ಬೇರೆ ಯಾವುದೇ ರೀತಿಯ ವಸ್ತುಗಳನ್ನು ಬಸ್‍ನಲ್ಲಿ ಸಾಗಿಸುತ್ತಿದ್ದರೂ ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

5 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

19 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

20 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

21 hours ago