ಬೆಂಗಳೂರು : ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಪ್ರತಿಯೊಂದು ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಪೊಲೀಸರಿಗೆ ರಜೆ ಇಲ್ಲ;
ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು ಎಂದರು.
ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…