Categories: ರಾಜ್ಯ

ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಪ್ರತಿಯೊಂದು ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು‌.

ಪೊಲೀಸರಿಗೆ ರಜೆ ಇಲ್ಲ;
ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ‌ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು‌ ಎಂದರು.

ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ‌ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

42 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

1 hour ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago