ಬೆಂಗಳೂರು : ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಪ್ರತಿಯೊಂದು ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಪೊಲೀಸರಿಗೆ ರಜೆ ಇಲ್ಲ;
ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು ಎಂದರು.
ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…