Categories: ರಾಜ್ಯ

ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಪ್ರತಿಯೊಂದು ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು‌.

ಪೊಲೀಸರಿಗೆ ರಜೆ ಇಲ್ಲ;
ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ‌ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ. ಸದ್ಯಕ್ಕೆ ಯಾವುದೇ ರಜೆ ಇಲ್ಲ. ಪರಿಸ್ಥಿತಿ ಸಾಮಾನ್ಯಕ್ಕೆ ಬಂದಿರುವುದನ್ನು ಕೇಂದ್ರ ಸರ್ಕಾರ ನಮಗೆ ತಿಳಿಸುತ್ತದೆ. ಅಲ್ಲಿಯವರೆಗೂ ನಾವು ಸೂಕ್ಷ್ಮವಾಗಿರಬೇಕು‌ ಎಂದರು.

ಕರಾವಳಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗುತ್ತದೆ. ಕರಾವಳಿಯಲ್ಲಿ ಬಿಗಿ ಭದ್ರತೆ ‌ವಹಿಸಿದ್ದೇವೆ. ಮಂಗಳೂರು, ಉತ್ತರ ಕನ್ನಡದಲ್ಲಿ ನಿಗಾ ವಹಿಸಲಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ವಹಿಸಿದೆ. ನೇವಿ ಅವರು ಕೂಡ ಭದ್ರತೆ ವಹಿಸಿದ್ದಾರೆ. ನಮ್ಮ ಬಾರ್ಡರ್ ಒಳಗೆ ಸೆಕ್ಯೂರಿಟಿ ಇದೆ. ಆ ಮಾಹಿತಿ ನಮಗೆ ಬಂದಿಲ್ಲ. ಕೇಂದ್ರದವರು ಏನಾದರೂ ಇದ್ದರೆ ಹೇಳುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago