ramya
ಬೆಂಗಳೂರು: ನಟಿ ರಮ್ಯಾ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಟೀಕೆಗಳ ಬಗ್ಗೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.
ಜಾಲತಾಣದಲ್ಲಿ ಯಾರೇ ಆಗಲಿ ಮಹಿಳೆಯರ ಬಗ್ಗೆ ಕೀಳು ಮಟ್ಟದ ಪೋಸ್ಟ್ಗಳನ್ನು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಅವರು ಎಚ್ಚರಿಕೆ ನೀಡಿದ್ದಾರೆ.
ಮಹಿಳೆಯರಿಗೆ ಮಾನಸಿಕವಾಗಿ ನೋಯಿಸುವ ಇಂಥವರಿಗೆ ಕಾನೂನಿನಡಿ 3 ರಿಂದ 7 ವರ್ಷದ ಜೈಲು ಶಿಕ್ಷೆಯಾಗಬಹುದು ಎಂದು ಹೇಳಿದ್ದಾರೆ.
ರಮ್ಯಾ ಅವರ ಬಗ್ಗೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ಟೀಕೆಗಳನ್ನು ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಮುನಾಯಕ ಎಂಬುವರು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ರಮ್ಯಾ ಅವರು ಸೆಲಿಬ್ರಿಟಿ ಎಂಬ ಕಾರಣಕ್ಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿಲ್ಲ. ಯಾವುದೇ ಹೆಣ್ಣು ಮಗಳಿಗೆ ಮಾನ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ಬಂದರೆ ನಾವು ಪ್ರಕರಣ ದಾಖಲಿಸುತ್ತೇವೆ. ಈಗ ರಮ್ಯಾಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಬಾರದೆಂದು ಆಯೋಗ ಬಯಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ದೂರಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು, ಸೆನ್ ಪೊಲೀಸ್ ಠಾಣೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…