ರಾಜ್ಯ

ಸಿಎಸ್‌ ವಿರುದ್ಧ ಅವಹೇಳನಕಾರಿ ಮಾತು : ಬಿಜೆಪಿಯ ರವಿಕುಮಾರ್‌ ವಿರುದ್ಧ ಎಫ್‌ಐಆರ್‌

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್ ವಿರುದ್ಧ ಆಕ್ಷೇಪರ್ಹ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ .ರವಿಕುಮಾರ್ ಮೇಲೆ ಎಪ್ ಐ ಆರ್ ದಾಖಲಾಗಿದ್ದು ಬಂಧನದ ಭೀತಿ ಎದುರಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಮನೋಹರ್ ಅವರ ದೂರಿನ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಪ್ ಐ ಆರ್ ದಾಖಲು ಮಾಡಿಕೊಳ್ಳಲಾಗಿದೆ.‌

ಇದೀಗ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ರವಿಕುಮಾರ್ ಅವರನ್ನು ವಶಕ್ಕೆ ಇಲ್ಲವೇ ಬಂಧಿಸಲುಬಹುದು. ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರು ಅಸಂಸದೀಯ ಪದ ಬಳಸಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು. ರವಿಕುಮಾರ್ ಅವರನ್ನು ಅಮಾನತು ಮಾಡುವಂತೆ ಮತ್ತು ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಕಾಂಗ್ರೆಸ್‌ನಿಂದ ದೂರು ದಾಖಲಾಗಿತ್ತು.

ಈ ಸಂಬಂಧ ವಿಧಾನ ಪರಿಷತ್ ಸಭಾಪತಿಗೆ ಕಾಂಗ್ರೆಸ್ ದೂರು ಸಲ್ಲಿಸಿತ್ತು. ಎನ್. ರವಿಕುಮಾರ್ ಅವರನ್ನು ಅಮಾನತು ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ. ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಪಡಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ಮನೋಹರ್ ಸಭಾಪತಿಗೆ ದೂರು ನೀಡಿದ್ದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ವಿಧಾನಸೌಧ ಭದ್ರತೆಯ ಉಪ ಪೊಲೀಸ್ ಆಯುಕ್ತ ಎಂ ಎನ್ ಕರಿಬಸವನಗೌಡ ಅವರೊಂದಿಗೆ ಚರ್ಚೆ ನಡೆಸುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದರು.‌

ಸಿಎಂ ವಿರುದ್ಧ ಬಿಜೆಪಿ ಎಮ್‌ಎಲ್‌ಸಿ ಎನ್. ರವಿಕುಮಾರ್ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡನೀಯವಾಗಿದೆ. ಹೆಣ್ಣುಮಕ್ಕಳ ಬಗ್ಗೆ ಅವರ ಭಾಷ್ಯ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಮತ್ತೆ ಮತ್ತೆ ಬಿಜೆಪಿಯವರಿಂದಲೇ ಇಂತಹ ಸಂದರ್ಭಗಳು ನಡೆಯುತ್ತಿವೆ ಎಂಬುದನ್ನು ಅವರು ಸಾಬೀತುಪಡಿಸುತ್ತಿದ್ದಾರೆ.

ರವಿಕುಮಾರ್ ಅವರನ್ನು ಮುಖ್ಯ ಸಚೇತಕ ಸ್ಥಾನದಿಂದ ತೆಗೆದುಹಾಕಬೇಕು. ಸಿಎಸ್ ಶಾಲಿನಿ ರಜನೀಶ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಂತಹ ಯಶಸ್ವಿ ಮಹಿಳಾ ಅಧಿಕಾರಿಯ ಕುರಿತು ಆಕ್ಷೇಪಾರ್ಹವಾಗಿ ಮಾತನಾಡುವುದು ಖಂಡನೀಯ. ಕಲಬುರಗಿ ಡಿಸಿ ವಿರುದ್ಧವೂ ಇಂತಹದೇ ರೀತಿಯಲ್ಲಿ ಅವರು ಮಾತನಾಡಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

34 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

1 hour ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

3 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

8 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

8 hours ago