ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಇಲ್ಲ ಸಲ್ಲದ ಆರೋಪಗಳನ್ನು, ಹೇಳಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಗೊಂದಲ ಸೃಷ್ಠಿಸುವ ಬದಲು ಈಗಾಗಲೇ ತನಿಖೆ ಆರಂಭಿಸಿರುವ ಪಿ.ಎನ್ ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮದ ಬಗ್ಗೆ ದೇಸಾಯಿ ಆಯೋಗ ತನಿಖೆ ಆರಂಭಿಸಿದೆ. ಮುಡಾ ಹಗರಣ ಬಗ್ಗೆ ಯಾವುದೇ ಮಾಹಿತಿ ಇದ್ದರೂ ವಿರೋಧ ಪಕ್ಷಗಳು ಈ ಆಯೋಗಕ್ಕೆ ಮಾಹಿತಿ ನೀಡಿ ತನಿಖಾ ಪ್ರಕ್ರಿಯೆಗೆ ಸಹಕರಿಸಲಿ. ಅದು ಬಿಟ್ಟು ಬಹಿರಂಗವಾಗಿ ಗೊಂದಲ ಉಂಟುಮಾಡುವ ಹೇಳಿಕೆಗಳನ್ನು ಕೊಡುವುದನ್ನು ಮೊದಲು ನಿಲ್ಲಿಸಲಿ ಎಂದು ಹೇಳಿದರು.
ರಾಜ್ಯಪಾಲರು ಭದ್ರತೆ ಕೇಳಿದ ಹಿನ್ನೆಲೆಯಲ್ಲಿ ಉನ್ನತ ಭದ್ರೆಯನ್ನು ಒದಗಿಸಲಾಗಿದೆ. ರಾಜ್ಯಪಾಲರಿಗೆ ಯಾವ ರೀತಿಯ ಬೆದರಿಕೆ ಬಂದಿದೆ ಎಂಬ ಬಗ್ಗೆ ನಮಗೆ ಮಾಹಿತಿಯಿಲ್ಲ. ಬಿಜೆಪಿಯವರ ಇತ್ತೀಚೆಗಿನ ಬೆಳವಣಿಗೆಯೇ ಇಂತಹ ಸನ್ನಿವೇಶಗಳಿಗೆ ಕಾರಣವಾಗಿದೆ ಎಂದರು.
ಇನ್ನು ಎಚ್ಡಿ ಕುಮಾರಸ್ವಾಮಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಷ್ಟೆ ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…