ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಇಲ್ಲ ಸಲ್ಲದ ಆರೋಪಗಳನ್ನು, ಹೇಳಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಗೊಂದಲ ಸೃಷ್ಠಿಸುವ ಬದಲು ಈಗಾಗಲೇ ತನಿಖೆ ಆರಂಭಿಸಿರುವ ಪಿ.ಎನ್ ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮದ ಬಗ್ಗೆ ದೇಸಾಯಿ ಆಯೋಗ ತನಿಖೆ ಆರಂಭಿಸಿದೆ. ಮುಡಾ ಹಗರಣ ಬಗ್ಗೆ ಯಾವುದೇ ಮಾಹಿತಿ ಇದ್ದರೂ ವಿರೋಧ ಪಕ್ಷಗಳು ಈ ಆಯೋಗಕ್ಕೆ ಮಾಹಿತಿ ನೀಡಿ ತನಿಖಾ ಪ್ರಕ್ರಿಯೆಗೆ ಸಹಕರಿಸಲಿ. ಅದು ಬಿಟ್ಟು ಬಹಿರಂಗವಾಗಿ ಗೊಂದಲ ಉಂಟುಮಾಡುವ ಹೇಳಿಕೆಗಳನ್ನು ಕೊಡುವುದನ್ನು ಮೊದಲು ನಿಲ್ಲಿಸಲಿ ಎಂದು ಹೇಳಿದರು.
ರಾಜ್ಯಪಾಲರು ಭದ್ರತೆ ಕೇಳಿದ ಹಿನ್ನೆಲೆಯಲ್ಲಿ ಉನ್ನತ ಭದ್ರೆಯನ್ನು ಒದಗಿಸಲಾಗಿದೆ. ರಾಜ್ಯಪಾಲರಿಗೆ ಯಾವ ರೀತಿಯ ಬೆದರಿಕೆ ಬಂದಿದೆ ಎಂಬ ಬಗ್ಗೆ ನಮಗೆ ಮಾಹಿತಿಯಿಲ್ಲ. ಬಿಜೆಪಿಯವರ ಇತ್ತೀಚೆಗಿನ ಬೆಳವಣಿಗೆಯೇ ಇಂತಹ ಸನ್ನಿವೇಶಗಳಿಗೆ ಕಾರಣವಾಗಿದೆ ಎಂದರು.
ಇನ್ನು ಎಚ್ಡಿ ಕುಮಾರಸ್ವಾಮಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಷ್ಟೆ ಹೇಳಿದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…