ರಾಜ್ಯ

ಲೋಕಸಭಾ ಚುನಾವಣೆ: ರಾಜ್ಯ ಮತದಾರರ ಮಾಹಿತಿ ಇಲ್ಲಿದೆ ನೋಡಿ!

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ನಡೆಯುತ್ತದೆ.

ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಮೇ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 5,42,08,088 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು 2,71,21,407 ಕೋಟಿ ಇದ್ದರೇ, ಮಹಿಳೆಯರು 2,70,81,748 ಕೋಟಿ ಇದ್ದಾರೆ. ತೃತೀಯ ಲಿಂಗಿಗಳ ಸಂಖ್ಯೆ 4,933 ಮತದಾರರು ಇದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಅರ್ಜಿ ಸಲ್ಲಿಕೆ ವಿವರ:

ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್‌ 28
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್‌ 4
ನಾಮಪತ್ರ ಪರಿಶೀಲನೆ: ಏಪ್ರಿಲ್‌ 5
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್‌ 8 ವರೆಗೆ ಇರಲಿದೆ.

ಎರಡನೇ ಹಂತದ ಮತದಾನಕ್ಕೆ ಅರ್ಜಿ ಸಲ್ಲಿಕೆ ವಿವರ:

ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಏಪ್ರಿಲ್‌ 12
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್‌ 19
ನಾಮಪತ್ರ ಪರಿಶೀಲನೆ: ಏಪ್ರಿಲ್‌ 20
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್‌ 22 ವರೆಗೆ ಇರಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

40 mins ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

47 mins ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

51 mins ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

53 mins ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

1 hour ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

1 hour ago