ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ನಡೆಯುತ್ತದೆ.
ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಮೇ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 5,42,08,088 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು 2,71,21,407 ಕೋಟಿ ಇದ್ದರೇ, ಮಹಿಳೆಯರು 2,70,81,748 ಕೋಟಿ ಇದ್ದಾರೆ. ತೃತೀಯ ಲಿಂಗಿಗಳ ಸಂಖ್ಯೆ 4,933 ಮತದಾರರು ಇದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದೆ.
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಅರ್ಜಿ ಸಲ್ಲಿಕೆ ವಿವರ:
ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್ 28
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 4
ನಾಮಪತ್ರ ಪರಿಶೀಲನೆ: ಏಪ್ರಿಲ್ 5
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್ 8 ವರೆಗೆ ಇರಲಿದೆ.
ಎರಡನೇ ಹಂತದ ಮತದಾನಕ್ಕೆ ಅರ್ಜಿ ಸಲ್ಲಿಕೆ ವಿವರ:
ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಏಪ್ರಿಲ್ 12
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 19
ನಾಮಪತ್ರ ಪರಿಶೀಲನೆ: ಏಪ್ರಿಲ್ 20
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್ 22 ವರೆಗೆ ಇರಲಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…