ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುವುದು ಅಪಾಯವೆಂದು ಆಹಾಯ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೃಢಪಡಿಸಿದೆ. ಈ ಬೆನ್ನಲ್ಲೇ, ಇಲಾಖೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ.
ಹಿಂದೆಲ್ಲಾ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಆದರೆ, ಇದೀಗ ಪ್ಲಾಸ್ಟಿಕ್ ಹಾಳೆಗಳನ್ನು ಉಪಯೋಗಿಸುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲಿಸಿದಾಗ, 52 ಕಡೆ ಪ್ಲಾಸ್ಟಿಕ್ ಹಾಳೆ ಬಳಸಿ ಇಡ್ಲಿ ಬೇಯಿಸಿರುವುದು ಪತ್ತೆಯಾಗಿದೆ. ಪ್ಲಾಸ್ಟಿಕ್ ಕ್ಯಾನ್ಸರ್ಕಾರಕ ಅಂಶಗಳನ್ನು ಹೊಂದಿದೆ. ಇದು ಇಡ್ಲಿಗೆ ಸೇರಿದರೆ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ ಎಂದು ಗುರುವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಬಳಸಿದರೆ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದು ಕ್ಯಾನ್ಸರ್ಗೆ ಕಾರಣವಾಗಲಿದೆ. ಯಾವುದೇ ಕಾರಣಕ್ಕೂ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ. ಬಳಸಿದರೆ ದಂಡ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…