ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುವುದು ಅಪಾಯವೆಂದು ಆಹಾಯ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೃಢಪಡಿಸಿದೆ. ಈ ಬೆನ್ನಲ್ಲೇ, ಇಲಾಖೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ.
ಹಿಂದೆಲ್ಲಾ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಆದರೆ, ಇದೀಗ ಪ್ಲಾಸ್ಟಿಕ್ ಹಾಳೆಗಳನ್ನು ಉಪಯೋಗಿಸುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳು 251 ಸ್ಥಳಗಳಲ್ಲಿ ಪರಿಶೀಲಿಸಿದಾಗ, 52 ಕಡೆ ಪ್ಲಾಸ್ಟಿಕ್ ಹಾಳೆ ಬಳಸಿ ಇಡ್ಲಿ ಬೇಯಿಸಿರುವುದು ಪತ್ತೆಯಾಗಿದೆ. ಪ್ಲಾಸ್ಟಿಕ್ ಕ್ಯಾನ್ಸರ್ಕಾರಕ ಅಂಶಗಳನ್ನು ಹೊಂದಿದೆ. ಇದು ಇಡ್ಲಿಗೆ ಸೇರಿದರೆ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ ಎಂದು ಗುರುವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಬಳಸಿದರೆ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದು ಕ್ಯಾನ್ಸರ್ಗೆ ಕಾರಣವಾಗಲಿದೆ. ಯಾವುದೇ ಕಾರಣಕ್ಕೂ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ. ಬಳಸಿದರೆ ದಂಡ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…