ರಾಜ್ಯ

ಕರವೇ ನಾರಾಯಣಗೌಡಗೆ ಇನ್ನೂ 4 ದಿನ ಜೈಲು; ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರಿನ ಮಾಲ್‌ಗಳು ಹಾಗೂ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳಿಲ್ಲದ ಕಾರಣ ಕನ್ನಡ ಜಾಗೃತಿ ಅಭಿಯಾನವನ್ನು ಕನ್ನಡ ರಕ್ಷಣಾ ವೇದಿಕೆ ಸೇರಿ ಹಲವಾರು ಕನ್ನಡ ಪರ ಸಂಘಟನೆಗಳು ನಡೆಸಿದ್ದವು. ಈ ಅಭಿಯಾನದಡಿಯಲ್ಲಿ ಕನ್ನಡದಲ್ಲಿ ನಾಮಫಲಕಗಳನ್ನು ಹಾಕದ ಅಂಗಡಿಗಳ ಇಂಗ್ಲಿಷ್‌ ಬೋರ್ಡ್‌ಗಳನ್ನು ಒಡೆದು ಪ್ರತಿಭಟನೆಯನ್ನು ನಡೆಸಲಾಯಿತು.

ಈ ಕಾರಣಕ್ಕಾಗಿ ಕರವೇ ಅಧ್ಯಕ್ಷ ನಾರಾಯಣಗೌಡ ಹಾಗೂ ಅನೇಕ ಸದಸ್ಯರುಗಳನ್ನು ಪೊಲೀಸರು ಬಂಧಿಸಿದ್ದರು. ನಾರಾಯಣ ಗೌಡ ಅವರನ್ನು ಬಿಡುಗಡೆ ಮಾಡಬೇಕು ಎಂದೂ ಸಹ ಪ್ರತಿಭಟನೆಗಳು ನಡೆದಿದ್ದವು. ಆದರೆ ಘಟನೆ ನಡೆದು ಮೂರ್ನಾಲ್ಕು ದಿನಗಳು ಕಳೆದರೂ ಸಹ ನಾರಾಯಣಗೌಡಗೆ ಬಿಡುಗಡೆ ಭಾಗ್ಯ ದೊರಕದೇ ಇದ್ದು, ಇಂದಿನ ಕೋರ್ಟ್‌ ವಿಚಾರಣೆ ಬಳಿಕ ಸಹ ಜಾಮೀನು ಸಿಗದೇ ಆದೇಶ ಮುಂದೂಡಲ್ಪಟ್ಟಿದೆ.

ಇಂದು ( ಜನವರಿ 2 ) ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್‌ ಕೋರ್ಟ್‌ ಆದೇಶವನ್ನು ಕಾಯ್ದಿರಿಸಿದ್ದು, ಜನವರಿ 6ರಂದು ಜಾಮೀನು ಬಗ್ಗೆ ಆದೇಶ ಪ್ರಕಟಿಸಲಿದೆ. ಹೀಗಾಗಿ ಇನ್ನೂ ನಾಲ್ಕು ದಿನಗಳ ಕಾಲ ನಾರಾಯಣಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ನಾರಾಯಣಗೌಡ ಜತೆಗೆ 32 ಕರವೇ ಕಾರ್ಯಕರ್ತರ ಬಂಧನ ಕೂಡ ಆಗಿದೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

19 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

19 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

24 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

24 hours ago