cm siddarsmiah
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ‘ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಂದು ದಲಿತ ಸಮುದಾಯವೂ ದಿನ ದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು’ ಎಂದು ದೇವನೂರು ಮಹಾದೇವ ಸಲಹೆ ನೀಡಿದ್ದಾರೆ.
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…