cm siddarsmiah
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ‘ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಂದು ದಲಿತ ಸಮುದಾಯವೂ ದಿನ ದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು’ ಎಂದು ದೇವನೂರು ಮಹಾದೇವ ಸಲಹೆ ನೀಡಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…