ರಾಜ್ಯ

ದೇವೇಗೌಡರಿಗೆ 92ನೇ ಜನ್ಮದಿನ ; ಮೋದಿ, ಸಿದ್ದರಾಮಯ್ಯ ಸೇರಿ ಹಲವರು ಗಣ್ಯದಿಂರ ಶುಭಾಶಯ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜೆಡಿಎಸ್‌‍ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಮುಖದಲ್ಲಿ ತಮ್ಮ 92ನೇ ಜನದಿನವನ್ನು ಆಚರಿಸಿಕೊಂಡರು.

ಇಂದು ಬೆಳಿಗ್ಗೆ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನವನ್ನು ಕುಟುಂಬ ಸದಸ್ಯರೊಂದಿಗೆ ಪಡೆದು ನಂತರ ಜೆಡಿಎಸ್‌‍ ಕಚೇರಿಯಲ್ಲಿ ಆಯೋಜಿಸಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಗೌಡರು ಪಾಲ್ಗೊಂಡರು.

ಬಳಿಕ ಮಾತನಾಡಿದ ಅವರು, ಕಳೆದ 1986 ರಿಂದಲೂ ನನ್ನ ಹುಟ್ಟುಹಬ್ಬವಾದ ಮೇ 18 ರಂದು ಪ್ರತಿವರ್ಷ ತಿರುಪತಿಗೆ ಹೋಗಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯುತ್ತಿದ್ದೇನೆ. ಆರು ವರ್ಷಗಳ ಹಿಂದೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರ ಜೊತೆಯಲ್ಲಿ ತಿರುಪತಿಗೆ ಹೋಗಿದ್ದೆ. ಅನಂತರ ಮಂಡಿನೋವಿನ ಕಾರಣದಿಂದಾಗಿ ತಿರುಪತಿಗೆ ಹೋಗಿರಲಿಲ್ಲ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಅವರು ತಿರುಮಲದಲ್ಲಿ 12 ಕೊಠಡಿಗಳ ಅತಿಥಿಗೃಹ ನಿರ್ಮಾಣ ಮಾಡಿದ್ದಾರೆ. ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು.

ಕುಮಾರಸ್ವಾಮಿಯವರಿಗೆ ನವದೆಹಲಿಯಲ್ಲಿ ಹೊಸಮನೆಯನ್ನು ಕೇಂದ್ರ ಸರ್ಕಾರ ಕೊಟ್ಟಿದೆ. ನಾಳೆ ಆ ಮನೆ ಪ್ರವೇಶವನ್ನು ಮಾಡುತ್ತಾರೆ. ಪ್ರಧಾನಿ ನರೇಂದ್ರಿ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಷಾ ಸೇರಿದಂತೆ ಹಲವು ನಾಯಕರು ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

ಪ್ರಧಾನಿ ಹಾಗೂ ಅಮಿತ್‌ ಷಾ ಅವರು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ರಾಷ್ಟ್ರಪತಿಗಳು, ಮಾಜಿ ರಾಷ್ಟ್ರಪತಿಗಳು, ರಾಜ್ಯಪಾಲರು ಕೂಡ ಶುಭಾಶಯ ಕೋರಿದ್ದಾರೆ.

ನಾನು ಪಕ್ಷದ ಒಬ್ಬ ಕಾರ್ಯಕರ್ತನಾಗಿ ಸಾಧ್ಯವಾದಷ್ಟು ಕೆಲಸ ಮಾಡುತ್ತೇನೆ. ವ್ಹೀಲ್‌ಚೇರ್‌ನಲ್ಲಿ ರಾಜ್ಯಸಭೆಗೆ ಹೋಗುತ್ತೇನೆ. ರಾಜ್ಯದ ಸಮಸ್ಯೆಗಳ ಬಗ್ಗೆ ಯಾವುದೇ ಅಂಜಿಕೆ ಇಲ್ಲದೆ ಮಾತನಾಡುತ್ತೇನೆ ಎಂದರು.

ಮೋದಿ, ಸಿದ್ದರಾಮಯ್ಯ ಸೇರಿ ಹಲವರಿಂದ ಶುಭಾಶಯ ಮಾಜಿ ಪ್ರಧಾನಿ ದೇವೇಗೌಡರಿಗೆ, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ರಾಷ್ಟ್ರದ ಹಲವು ನಾಯಕರು ಶುಭಾಶಯ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago