ರಾಜ್ಯ

ಕಾಡ್ಗಿಚ್ಚು ನಿಯಂತ್ರಿಸಲು ಯೋಜನೆ ರೂಪಿಸಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು.

ಪದೇ ಪದೇ ಕಾಡ್ಗಿಚ್ಚು ಸಂಭವಿಸುವ ಪ್ರದೇಶಗಳಲ್ಲಿ ಬೆಂಕಿರೇಖೆ ನಿರ್ಮಿಸಲು, ದೈನಂದಿನ ಆಧಾರದಲ್ಲಿ ಪರಾಮರ್ಶೆ ನಡೆಸಿ, ಕಾಡ್ಗಿಚ್ಚು ನಿಯಂತ್ರಣ ಯೋಜನೆ ರೂಪಿಸಿ, ಕ್ಷೇತ್ರಮಟ್ಟದ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ ಬೆಂಕಿಯಿಂದ ಕಾಡು ನಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಕಿಡಿಗೇಡಿಗಳು ಕಾಡಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದರೆ ಅಂತಹವರ ವಿರುದ್ಧ ಎಫ್ಐ.ಆರ್. ದಾಖಲಿಸಲು ಮತ್ತು ಪೊಲೀಸ್‌ ನೆರವು ಪಡೆಯಲು ಸೂಚಿಸಿದ ಸಚಿವರು, ಗ್ರಾಮಸಭೆ, ಸಮುದಾಯ ಸಭೆ ನಡೆಸುವ ಮೂಲಕ ಕಾಡ್ಗಿಚ್ಚು ಕಾಣಿಸಿಕೊಳ್ಳದಂತೆ ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡ ಕೂಡಲೆ ಅದನ್ನು ನಂದಿಸಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago