ರಾಜ್ಯ

ಕಲ್ಯಾಣ ಕರ್ನಾಟಕ ಭಾಗವನ್ನು ಮೈಸೂರಿನಂತೆ ಅಭಿವೃದ್ಧಿ ಮಾಡಿ : ಖರ್ಗೆ ಆಗ್ರಹ

ಯಾದಗಿರಿ : ಕಲ್ಯಾಣ ಕರ್ನಾಟಕ ಭಾಗವನ್ನು ಸಿಂಗಾಪುರ ಮಾಡುವುದು ಬೇಡ. ಮೈಸೂರು, ಬೆಂಗಳೂರಿನ ಮಟ್ಟಕ್ಕಾದರೂ ಅಭಿವೃದ್ಧಿ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಯಾದಗಿರಿಯಲ್ಲಿ ಆರೋಗ್ಯ ಇಲಖೆಯ 440.63 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳು, ಆರೋಗ್ಯ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ ಮತ್ತು ಜಿಲ್ಲಾ ಬಂಜಾರ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರನ್ನು ಸಿಂಗಾಪುರ ಮಾಡುವುದಾಗಿ ಹೇಳುತ್ತಿದ್ದರು. ನೀವು ಸಿಂಗಾಪುರವಾದರೂ ಮಾಡಿಕೊಳ್ಳಿ. ಬೇರೆ ಏನಾದರೂ ಮಾಡಿ. ಆದರೆ ನಮ್ಮ ಕಲ್ಯಾಣ ಕರ್ನಾಟಕ ಭಾಗವನ್ನು ಸಿದ್ದರಾಮಯ್ಯ ಅವರ ಮೈಸೂರಿನಂತೆ, ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನಂತೆ ಅಭಿವೃದ್ಧಿ ಮಾಡಿ ಎಂದು ಹೇಳಿದರು.

ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಹಣ ಖರ್ಚು ಮಾಡಲೇಬೇಕು. ಈಗ ಕೊಟ್ಟಿರುವ ಹಣವನ್ನು ಆಯಾ ವರ್ಷಕ್ಕೆ ಖರ್ಚು ಮಾಡಿ ಹೆಚ್ಚಿನ ಹಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು, ಶಾಸಕರು, ಅ„ಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಕೊಟ್ಟ ಹಣ ಖರ್ಚು ಮಾಡುವುದಿಲ್ಲ ಎಂಬ ಕಪ್ಪು ಚುಕ್ಕೆಗೆ ಗುರಿಯಾಗಬಾರದು. ಹಣ ಖರ್ಚು ಮಾಡಿ ಈ ಭಾಗದ ಜನರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ತಾವು ಗುರುಮಿಟ್ಕಲ್ ಶಾಸಕಾರಾದಾಗ ಈ ಭಾಗಕ್ಕೆ 3 ಬೀದಿ ದೀಪಗಳಿದ್ದವು. ಕೆರೆ ಕಾಲುವೆ, ರಸ್ತೆಗಳೂ ಇರಲಿಲ್ಲ. ಅವುಗಳನ್ನು ಅಭಿವೃದ್ಧಿಪಡಿಸಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಜನ ಅದನ್ನು ನೆನಪಿಸಿಕೊಂಡಿಲ್ಲ ಎಂದು ವಿಷಾದಿಸಿದರು.

ಕಲ್ಯಾಣ ಕರ್ನಾಟಕ ಭಾಗ ಶಿಕ್ಷಣದಲ್ಲಿ ಸದಾಕಾಲ ಹಿಂದುಳಿಯುತ್ತಿದೆ. ಫಲಿತಾಂಶದಲ್ಲಿ ಕೆಳಗಿನಿಂದ ನಮ್ಮ ಜಿಲ್ಲೆಗಳ ಹೆಸರುಗಳು ನಮೂದಾಗಿರುತ್ತವೆ. ಇಲ್ಲಿ ಗಣಿತ, ವಿಜ್ಞಾನ, ಇಂಗ್ಲೀಷ್ ಭಾಷೆ ಕಲಿಸಲು ಶಿಕ್ಷಕರಿಲ್ಲ. ಕೂಡಲೇ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ನೇಮಕಾತಿಗೆ ತಡೆ ನೀಡಿರುವುದಾಗಿ ನನ್ನ ಗಮನಕ್ಕೆ ಬಂದಿದೆ. ಯಾವ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗುತ್ತದೆಯೋ ಅಂತಹ ಸಮುದಾಯಗಳಿಗೆ ಖಾಲಿ ಇರುವ ಹುದ್ದೆಗಳಲ್ಲಿ ಶೇ.10, 15, 18 ರಷ್ಟು ಎಷ್ಟು ಸಾಧ್ಯವೋ ಅಷ್ಟನ್ನು ಬ್ಯಾಕ್‍ಲಾಗ್ ಹುದ್ದೆಗಳನ್ನಾಗಿ ಮೀಸಲಿಟ್ಟು ಉಳಿದ ಎಲ್ಲಾ ಹುದ್ದೆಗಳನ್ನೂ ಕೂಡಲೇ ಭರ್ತಿ ಮಾಡಬೇಕು. ಏಕಾಏಕಿ ಎಲ್ಲಾ ನೇಮಕಾತಿಗಳಿಗೂ ತಡೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಶರಣಬಸಪ್ಪ ದರ್ಶನಾಪೂರ್, ದಿನೇಶ್‍ಗುಂಡೂರಾವ್, ಡಾ.ಶರಣಪ್ರಕಾಶ್ ಪಾಟೀಲ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ್‍ಖಂಡ್ರೆ, ಎನ್.ಎಸ್.ಬೋಸರಾಜು, ಡಿ.ಸುಧಾಕರ್, ರಹೀಂಖಾನ್, ಸಂಸದರಾದ ರಾಧಾಕೃಷ್ಣ, ಕುಮಾರ್‍ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

1 hour ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago