ರಾಜ್ಯ

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳು ನಿಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ.

ರಾಜ್ಯ ಸರ್ಕಾರವು 2023-24ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದೆ. ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.

ರಾಜ್ಯ ಸರ್ಕಾರವು ರಾಜಸ್ವ ಹಾಗು ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು, ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago