Nikhil kumaraswamy
ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಮೆಟ್ರೋ ಶಂಕು ಸ್ಥಾಪನೆ ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ. ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಫ್ಲೈಓವರ್ ಕಾನ್ಸೆಪ್ಟ್ ತಂದಿದ್ದ ಎಚ್.ಡಿ.ದೇವೇಗೌಡರು, ಕಾವೇರಿ 4ನೇ ಹಂತದ ಯೋಜನೆ ತಂದಿದ್ದು ಸಹ ದೇವೇಗೌಡರು. ಎಚ್ಡಿಡಿ ಅವರು ಯಾರೂ ಅಳಿಸಲಾಗದಷ್ಟು ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಬಿಬಿಎಂಪಿ ರಚಿಸಿದರು. ಈಗ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಕುಸಿದಿವೆ. ಬಿಬಿಎಂಪಿ ಬದಲಿಸಿ ಜಿಬಿಎ ಮಾಡಿದ್ದೇ ಇವರ ಸಾಧನೆ. ಜಿ ಎಂದರೆ ಗಾರ್ಬೇಜ್ ಬಿ ಎಂದರೇ ಬ್ಯಾಡ್ರೋಡ್ ಎ ಎಂದರೆ ಎ ಖಾತೆ ಸ್ಕ್ಯಾಮ್. ಇದು ಜಿಬಿಎ ಎಂದು ಟೀಕೆ ಮಾಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…