IGP om prakash funeral
ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ನಿನ್ನೆ ಪತ್ನಿಯೇ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ ಓಂ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ಟೆನ್ನಿಸ್ ಕೋರ್ಟ್ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುದ್ದಿ ಹಿನ್ನೆಲೆ:- ನಿವೃತ್ತ DGP ಹತ್ಯೆ ಪ್ರಕರಣ: ತನಿಖಾಧಿಕಾರಿ ಎಗ್ರರು ಹತ್ಯೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ
ಈ ವೇಳೆ ಸಂಬಂಧಿಕರು, ಸ್ನೇಹಿತರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಚಿವರು ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಬಳಿಕ ಪಾರ್ಥಿವ ಶರೀರವನ್ನು ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…