DGP murder case investigation
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಸ್ ಅವರ ಹತ್ಯೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ಅನೇಕ ಸ್ಫೋಟಕ ಅಂಶಗಳಯ ಹೊರಬೀಳುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡಿಜಿಪಿ ಪತ್ನಿ ಪಲ್ಲವಿ ಹೇಳಿದ್ದೇನು?
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಆಗಾಗ್ಗ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಬೆಳಗ್ಗೆಯಿಂದ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು
ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಬೇಕಾಯಿತು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ.
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…
ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ಐಆರ್…
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…
ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…